TSK

TSK · ಅಪೊಸ್ತಲರ ಕೃತ್ಯಗ 13:47

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.

ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.

ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.

¶ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ ಇದೇ.

ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.

ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.”

ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”

ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.

¶ ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.

ನನ್ನ ಜನರು ಎದೋಮಿನ ಉಳಿದ ಭಾಗವನ್ನು, ಯೆಹೋವನ ಪ್ರಜೆ ಎನ್ನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಿಲ್ಲಿಸಿ ಮೊದಲಿದ್ದಂತೆ ಅದನ್ನು ತಿರುಗಿ ಕಟ್ಟಿಸುವೆನು” ಎಂಬುದಾಗಿ ಯೆಹೋವನು ನುಡಿದಿದ್ದಾನೆ.

ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.

ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.

“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಆ ಮೇಲೆ ಅವರಿಗೆ, ‹“ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.›

‹ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.›

ಕರ್ತನು ಅವನಿಗೆ, ‹“ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.›

ಆದರೆ ಆತನು; ‹‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’”› ಹೇಳಿದನು.

ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ.