TSK

TSK · ಅಪೊಸ್ತಲರ ಕೃತ್ಯಗ 14:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು.

ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?

“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.

ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,

ಆದುದರಿಂದ ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ಆಗುವ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.

ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.

ವ್ಯರ್ಥವಾದ ವಿಗ್ರಹಗಳನ್ನೂ ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ; ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.

ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.

ಪ್ರಾರಂಭದಲ್ಲಿ, ಭೂಮಿಯು ಹುಟ್ಟುವುದಕ್ಕಿಂತ ಮುಂಚೆ, ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು.

“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ, ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.

ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.

ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ.

ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.

ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.

“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.

¶ “ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;

“ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.

ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.

‹ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.›

ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,

¶ “ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;

¶ ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.

¶ ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.

¶ ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.

ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.

¶ ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.

ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.

ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.

¶ ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.

ಆದರೆ ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.