TSK

TSK · ಅಪೊಸ್ತಲರ ಕೃತ್ಯಗ 14:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು.

ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.

¶ ಅನೇಕ ದಿನಗಳಾದ ನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರ್ಷದಲ್ಲಿ ಯೆಹೋವನು ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು. ನಾನು ದೇಶಕ್ಕೆ ಮಳೆ ಕೊಡುತ್ತೇನೆ” ಎಂದನು.

ಭೂಮಿಯ ಮೇಲೆ ಮಳೆಸುರಿಸಿ, ಹೊಲಗದ್ದೆಗಳಿಗೆ ನೀರನ್ನು ಒದಗಿಸುತ್ತಾನೆ.

ಹಾಳುಬೀಳಾದ ಭೂಮಿಯನ್ನು ತೃಪ್ತಿಪಡಿಸಿ, ಹಸಿ ಹುಲ್ಲನ್ನು ಬೆಳೆಯಿಸಬೇಕೆಂದು,

ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.

ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.

ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.

ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ.

ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.

“ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ, ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ.

ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು.

‹ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.›

ಒಂದು ವೇಳೆ ಅವರು ತಡವಾಗಿಯಾದರೂ ತನ್ನನ್ನು ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ.

¶ ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.