ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.
TSK
TSK · ಅಪೊಸ್ತಲರ ಕೃತ್ಯಗ 14:19
Treasury of Scripture Knowledge references in ಕನ್ನಡ IRV.
ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.
ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.
ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,
ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.
ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.
ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು.