TSK

TSK · ಅಪೊಸ್ತಲರ ಕೃತ್ಯಗ 15:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನೂ ನಿನ್ನ ಸಂತತಿಯುವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ, ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು ಎಂಬುದೇ.

‹ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ,›‹ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.›

ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.

¶ ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,

¶ ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.

ದೇವರು ಕರೆದ ಕಾಲದಲ್ಲಿ ಯಾವನಾದರೂ ಸುನ್ನತಿಯುಳ್ಳವನಾಗಿದ್ದನೋ ಅವನು ಸುನ್ನತಿಯಿಲ್ಲದವನಂತಾಗಬಾರದು. ದೇವರು ಕರೆದಾಗ ಯಾವನಾದರೂ ಸುನ್ನತಿಯಿಲ್ಲದವನಾಗಿದ್ದಾನೋ ಅವನು ಸುನ್ನತಿಮಾಡಿಸಿಕೊಳ್ಳಬಾರದು.

ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ.

¶ ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.

ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲಾ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.

¶ ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.

¶ ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.