TSK

TSK · ಅಪೊಸ್ತಲರ ಕೃತ್ಯಗ 15:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.

“ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೇ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.

¶ “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.

ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.

ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.