¶ ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,
TSK
TSK · ಅಪೊಸ್ತಲರ ಕೃತ್ಯಗ 15:20
Treasury of Scripture Knowledge references in ಕನ್ನಡ IRV.
ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.
ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.
¶ “‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.
ರಕ್ತವನ್ನು ಮಾತ್ರ ತಿನ್ನಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.
¶ ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸವನ್ನು ರಕ್ತದೊಡನೆ ತಿಂದರು.
¶ ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ” ಎಂದು ಅರಿಕೆಮಾಡಲು,
ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?
ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”
ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.
“ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ.
ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.
ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.
¶ ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ.
¶ ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,
¶ ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ.
ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
‹ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ.›‹ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ›‹ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು›‹ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.›
ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.
¶ ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ” ಎಂದು ಹೇಳಿತು.