TSK

TSK · ಅಪೊಸ್ತಲರ ಕೃತ್ಯಗ 16:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು.

¶ ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.

ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.

ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.

ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.

ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ? ಯಾವುದನ್ನರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನು ಅಥವಾ ಒಂದು ವರ್ಷದ ಕರುಗಳನ್ನು ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?

ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.

ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.

ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.

ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”

ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.

ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.

ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; “ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?” ಕೇಳಲು,

ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.

ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.