¶ ‹“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.›
TSK
TSK · ಅಪೊಸ್ತಲರ ಕೃತ್ಯಗ 16:19
Treasury of Scripture Knowledge references in ಕನ್ನಡ IRV.
¶ ‹“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,›
‹ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು”› ಎಂದು ಹೇಳಿದನು.
¶ ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.
ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿ ಕೊಡುವುದು ಯುಕ್ತವೆಂದು ನಾವೆಲ್ಲರೂ ಒಮ್ಮನಸ್ಸಿನಿಂದ ತೀರ್ಮಾನಿಸಿದೆವು.
ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.
ಹೇಗೆಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು.
ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ.
ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?