TSK

TSK · ಅಪೊಸ್ತಲರ ಕೃತ್ಯಗ 16:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.

ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು.

ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.

ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಎರಡು ಘಂಟೆ ಹೊತ್ತು ಕೂಗಿದರು.

ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.