TSK

TSK · ಅಪೊಸ್ತಲರ ಕೃತ್ಯಗ 16:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.

ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.

ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯಿಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು.

¶ ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.

ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.

¶ ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,

¶ ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.

¶ ನೀವು ಕರ್ತನಾದ ಯೇಸು ಕ್ರಿಸ್ತನನ್ನು ಸ್ವೀಕರಿಸಿದಂತೆಯೇ ಆತನಲ್ಲಿದ್ದವರಾಗಿ ಬಾಳಿರಿ.

ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.

ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.

ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.