TSK

TSK · ಅಪೊಸ್ತಲರ ಕೃತ್ಯಗ 16:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮತ್ತು “ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.

¶ ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.

ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ, “ತಡಮಾಡದೆ ನಮ್ಮ ಹತ್ತಿರಕ್ಕೆ ಬರಬೇಕೆಂದು” ಬೇಡಿಕೊಂಡರು.

ಅವನಿಗೆ ಬಹಳ ಹಸಿವಾಗಿ ಊಟಮಾಡ ಬಯಸಿದನು. ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ,

ನೀನು ಯಾರನ್ನಾದರು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು, ಅವನು ಚಮ್ಮಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರ ತೀರದ ಸಮೀಪವಿದೆ’ ಅಂದನು.

¶ ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.

¶ ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.

ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.

ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;

ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.

¶ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯ ಕುರಿತು ನಿಮಗೆ ತಿಳಿಯಬೇಕೆಂದು ಬಯಸುತ್ತೇವೆ,

ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು.

ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.

ಮಕೆದೋನ್ಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ಪ್ರೀತಿಸುತ್ತಿರುವುದೇನೋ ನಿಜವೇ. ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಉತ್ತೇಜಿಸುತ್ತೇವೆ.