¶ ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;
TSK
TSK · ಅಪೊಸ್ತಲರ ಕೃತ್ಯಗ 17:24
Treasury of Scripture Knowledge references in ಕನ್ನಡ IRV.
ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ.
ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.
ಆದರೆ ದೇವರು ನಿಜವಾಗಿ ಮನಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾಧಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಆಲಯವು ನಿನಗೆ ಹೇಗೆ ಸಾಕಾದೀತು?
ಪರಲೋಕವು ಯೆಹೋವನದು; ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ.
ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.
ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.
ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ.
ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.
“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.
¶ ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,
¶ ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, ‹“ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.›
¶ ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.
ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,
“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.
ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.
¶ ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.