TSK

TSK · ಅಪೊಸ್ತಲರ ಕೃತ್ಯಗ 17:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.

ನನ್ನ ಪ್ರಾಣಪ್ರಿಯನೇ, ನಿನ್ನ ಮಂದೆಯನ್ನು ಎಲ್ಲಿ ಮೇಯಿಸುವೆ? ನಡುಹಗಲಲ್ಲಿ ನಿನ್ನ ಮಂದೆಯು ಎಲ್ಲಿ ವಿಶ್ರಮಿಸುತ್ತಾರೆ? ಹೇಳು. ನಾನೇಕೆ ಅಲೆಮಾರಿಗಳಂತೆ ನಿನ್ನ ಗೆಳೆಯರ ಮಂದೆಗಳ ಹತ್ತಿರ ಅಲೆಯಬೇಕು?

ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.

ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?

ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು.

¶ ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು.

ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.

ಆಗ ಆ ಊರಿನ ಜನರು ಎರಡು ಭಾಗವಾದರೂ; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.

ಆದುದರಿಂದ ಯೂದನನ್ನೂ, ಸೀಲನನ್ನೂ ಕಳುಹಿಸಿಕೊಡುತ್ತಿದ್ದೇವೆ. ಅವರು ನಾವು ಬರೆದಿರುವ ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.

ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ

ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು.

ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.

ನಾವು ಇದನ್ನು ನಿರೀಕ್ಷಿಸದ ರೀತಿಯಲ್ಲಿ ಅವರು ಕೊಡದೆ, ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿದರು.