ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.
TSK
TSK · ಅಪೊಸ್ತಲರ ಕೃತ್ಯಗ 18:12
Treasury of Scripture Knowledge references in ಕನ್ನಡ IRV.
ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.
ಆದರೆ ನಂಬದೆ ಹೋದ ಯೆಹೂದ್ಯರು, ಅನ್ಯಜನರ ಮನಸ್ಸನ್ನು ಈ ಸಹೋದರರ ವಿರುದ್ಧವಾಗಿ ಪ್ರಚೋದಿಸಿ ಕೆಡಿಸಿದರು.
¶ ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.
ಅವರನ್ನು ನ್ಯಾಯಾಸ್ಥಾನದ ಸ್ಥಳದಿಂದ ಹೊರಡಿಸಿಬಿಟ್ಟನು.
¶ ಆ ಏಳು ದಿನಗಳು ಮುಗಿಯುತ್ತಿದ್ದಂತೆ ಅಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಚದುರಿಸಿ ಅವನನ್ನು ಹಿಡಿದು;
ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.
ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದು ಹಾಗೂ ಅವರು ದೇವಜನರ ಸೇವೆಗೋಸ್ಕರ ತಮ್ಮನ್ನು ಅರ್ಪಿಸಿದ್ದಾರೆಂದು ನೀವು ಬಲ್ಲವರಾಗಿದ್ದೀರಿ.
ನಿಮ್ಮ ಮನಸ್ಸಿನ ಬಯಕೆ ಏನೆಂಬುದು ನನಗೆ ಗೊತ್ತುಂಟು. ಕಳೆದ ವರ್ಷದಿಂದಲೂ ಅಖಾಯದವರು ಸಹಾಯಮಾಡುವುದಕ್ಕೆ ಸಿದ್ಧರಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.
ಹೀಗೆ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಕ್ರಿಸ್ತನನ್ನು ನಂಬುವವರೆಲ್ಲರಿಗೆ ಮಾದರಿಯಾದಿರಿ.