“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.
TSK
TSK · ಅಪೊಸ್ತಲರ ಕೃತ್ಯಗ 18:15
Treasury of Scripture Knowledge references in ಕನ್ನಡ IRV.
ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು.
ಇದಲ್ಲದೆ ಇವನು, ದೇವಾಲಯವನ್ನು ಹೊಲೆಮಾಡುವುದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು.
ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.
ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, ವಂಶಾವಳಿಗಳೂ ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ.
ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.