ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.
TSK
TSK · ಅಪೊಸ್ತಲರ ಕೃತ್ಯಗ 18:24
Treasury of Scripture Knowledge references in ಕನ್ನಡ IRV.
ಪಂಚಾಶತಾಧಿಪತಿ, ಘನವಂತನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರೆಲ್ಲರನ್ನು ತೊಲಗಿಸಿಬಿಡುವೆನು.
¶ ಆತನು ಅವರನ್ನು, ‹“ಯಾವ ಸಂಗತಿಗಳು”› ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.
ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ತಿಳಿವಳಿಕೆಯುಳ್ಳವನಾಗಿ ಮಾತುಗಳಲ್ಲಿಯೂ, ಕಾರ್ಯಗಳಲ್ಲಿಯೂ ಸಮರ್ಥನಾದನು.
ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರೊಳಗೆ ಹತ್ತಿಸಿದನು.
¶ ಸಹೋದರರೇ, ನಾನು ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ.
¶ ಪ್ರಿಯರೇ, ನಾನು ನಿಮಗೋಸ್ಕರವಾಗಿ ನನ್ನಗೂ ಅಪೊಲ್ಲೋಸನಿಗೂ ಈ ನಿಯಮಗಳನ್ನೆಲ್ಲಾ ಅನ್ವಯಿಸಿಕೊಂಡು ಹೇಳಿದ್ದೇನೆ. ಆದ್ದರಿಂದ ನೀವು “ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಿಹೋಗಬಾರದು,” ಎಂಬ ಈ ವಾಕ್ಯದ ಅರ್ಥವನ್ನು ನಮ್ಮಿಂದ ಕಲಿತುಕೊಂಡು, ನಿಮ್ಮಲ್ಲಿ ಯಾವನಾದರೂ ಒಬ್ಬನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದು ಎಂಬುದಕ್ಕಾಗಿದೆ.
“ಅವನಿಂದ ಬಂದ ಪತ್ರಿಕೆಗಳು ಕಠೋರವಾದವುಗಳೂ, ಪ್ರಬಲವಾದವುಗಳೂ ಆಗಿವೆ. ಆದರೆ ದೈಹಿಕವಾಗಿ ಅವನು ದುರ್ಬಲನು ಅವನ ಮಾತುಗಳು ನಿಂದಾತ್ಮಕವಾದವುಗಳೆಂದು ಕೆಲವರು ಹೇಳುತ್ತಾರಲ್ಲಾ.”
ನ್ಯಾಯಶಾಸ್ತ್ರಿಯಾದ ಜೇನನನ್ನೂ ಮತ್ತು ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಕಳುಹಿಸಿಕೊಡು; ಅವರಿಗೇನೂ ಕೊರತೆಯಾಗಬಾರದು.