TSK

TSK · ಅಪೊಸ್ತಲರ ಕೃತ್ಯಗ 18:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು.

ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.

ಅವರಿಗೆ, ‹“ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

‹ಅದಕ್ಕವನು, ‘ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು’ ಎಂದು ನಾನು ನಿಮಗೆ ಹೇಳುತ್ತೇನೆ›

‹ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.›

ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.

ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.

¶ ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”

ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲವೆಂದೂ,” ತಲೆಯು “ಪಾದಗಳಿಗೆ ನೀವು ನನಗೆ ಅವಶ್ಯವಿಲ್ಲವೆಂದೂ” ಹೇಳುವುದಕ್ಕಾಗುವುದಿಲ್ಲ.

¶ ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ.