ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.
TSK
TSK · ಅಪೊಸ್ತಲರ ಕೃತ್ಯಗ 18:27
Treasury of Scripture Knowledge references in ಕನ್ನಡ IRV.
ಆದರೆ ಸೀಲನಿಗೆ ಅಲ್ಲೇ ಇರುವುದು ಒಳ್ಳೆಯದೆಂದು ತೋಚಿತು.
¶ ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.
ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.
ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.
ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.
ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ.
ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.
¶ ನನ್ನ ಜೊತೆ ಸೆರೆಯವನಾದ ಅರಿಸ್ತಾರ್ಕನೂ ಮತ್ತು ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ.
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,
ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.