ನನ್ನಲ್ಲಿ ಮಾತುಗಳು ತುಂಬಿವೆ, ನನ್ನ ಅಂತರಾತ್ಮವು ನನ್ನನ್ನು ಒತ್ತಾಯಪಡಿಸುತ್ತದೆ.
TSK
TSK · ಅಪೊಸ್ತಲರ ಕೃತ್ಯಗ 18:5
Treasury of Scripture Knowledge references in ಕನ್ನಡ IRV.
“ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.
ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.
‹ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ.›
‘ನಾನು ಕ್ರಿಸ್ತನಲ್ಲ,’ ಆದರೆ ‘ಆತನಿಗೆ ಮುಂದಾಗಿ ಕಳುಹಿಸಲ್ಪಟ್ಟವನಾಗಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.
‹ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.›
ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು.
ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
¶ ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.
ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.
ಅವನು ಹೋಗಿ ಯೇಸುವೇ ಕ್ರಿಸ್ತನೆಂದು ದೇವರ ವಾಕ್ಯದಿಂದ ಯೆಹೂದ್ಯರಿಗೆ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಈ ವಿಷಯವನ್ನು ರುಜುವಾತುಪಡಿಸುತ್ತಾ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದವರಿಗೆ ಬಹಳ ಸಹಾಯಮಾಡಿದನು.
ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.
ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.