¶ “‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.
TSK
TSK · ಅಪೊಸ್ತಲರ ಕೃತ್ಯಗ 18:6
Treasury of Scripture Knowledge references in ಕನ್ನಡ IRV.
ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು.
ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.
ಕೊಂಬಿನ ಧ್ವನಿಯನ್ನು ಕೇಳಿದ ಯಾರೇ ಆಗಲಿ ಎಚ್ಚರಗೊಳ್ಳದೆ, ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಹೊಣೆಯಾಗುವನು.
‹ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;›
‹ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.›
ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.
‹ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು,›
ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.
ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.
¶ “ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.
ಆ ವಚನವೇನಂದರೆ, “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು.
ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.
ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾಗಿದ್ದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.
ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.