TSK

TSK · ಅಪೊಸ್ತಲರ ಕೃತ್ಯಗ 19:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.

ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.

ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.

ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆತನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆವು. ನೀನು ದೇವರಿಂದ ಬಂದ ಪರಿಶುದ್ಧನೇ” ಎಂದು ಜೋರಾಗಿ ಕೂಗಿ ಹೇಳಿದನು.

ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.