TSK

TSK · ಅಪೊಸ್ತಲರ ಕೃತ್ಯಗ 19:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಪರಿಶುದ್ಧ ದೇವರಾದ ಯೆಹೋವನ ಮುಂದೆ ಯಾರು ನಿಂತಾರು? ನಮ್ಮನ್ನು ಬಿಟ್ಟು ಈತನು ಹೋಗತಕ್ಕ ಸ್ಥಳ ಯಾವುದು ಎಂದು ಮಾತನಾಡಿಕೊಂಡು

ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.

ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.

ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.

ಅವರ ಜೊತೆಯಲ್ಲಿರುವುದಕ್ಕೆ ಉಳಿದವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು.

ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.

ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.

¶ ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,

ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.