ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.
TSK
TSK · ಅಪೊಸ್ತಲರ ಕೃತ್ಯಗ 19:26
Treasury of Scripture Knowledge references in ಕನ್ನಡ IRV.
ದೇವತೆಯನ್ನು ರೂಪಿಸುವವರೂ, ವ್ಯರ್ಥವಿಗ್ರಹವನ್ನು ಎರಕ ಹೊಯ್ಯುವವರೂ ಎಂಥವರು?
ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು.
ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.
ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.
ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು.
ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ,
ಪಂಚಾಶತ್ತಮ ದಿನ ಹಬ್ಬದ ತನಕ ಎಫೆಸದಲ್ಲಿರುವೆನು;
ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ