TSK

TSK · ಅಪೊಸ್ತಲರ ಕೃತ್ಯಗ 19:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.

ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂಮಿಯ ಕಟ್ಟ ಕಡೆಯವರು ನಡುಗಿದರು, ಎಲ್ಲರೂ ನೆರೆದು ಬಂದರು.

ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.

“ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.

ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.