TSK

TSK · ಅಪೊಸ್ತಲರ ಕೃತ್ಯಗ 19:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು.

ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.

ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.

ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಿಲಿನ ನಿಲವುಗಳ ಹತ್ತಿರವಿದ್ದು, ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.

ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.

‹ಅವರನ್ನು ಬಿಡಿರಿ, ಅವರು›‹ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು”› ಅಂದನು.

ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, ‹“ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;›

“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.

ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.

ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.

ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.

ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.

ನಾನು ಇವರ ನಡುವೆ ನಿಂತು; ‘ಪುನರುತ್ಥಾನದ ವಿಷಯದಲ್ಲಿ, ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ’ ಎಂದು ಕೂಗಿ ಹೇಳಿದರ ಬಗ್ಗೆ ಹೇಳಬಹುದೇ ಹೊರತು ಬೇರೆ ಏನನ್ನೂ ಹೇಳಲಾರರು” ಅಂದನು.

ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.

ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.

ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.

ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.

ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.