TSK

TSK · ಅಪೊಸ್ತಲರ ಕೃತ್ಯಗ 2:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.

¶ ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.

ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯ ಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದೆ ಹೋಗಲಿ!

ಅವನು ಬೆಳ್ಳಿ ಬಂಗಾರಗಳ ನಿಧಿನಿಕ್ಷೇಪಗಳನ್ನೂ, ಐಗುಪ್ತದ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನೂ ವಶಮಾಡಿಕೊಳ್ಳುವನು. ಲೂಬ್ಯರೂ, ಕೂಷ್ಯರೂ ಅವನನ್ನು ಹಿಂಬಾಲಿಸಿ ಹೋಗುವರು.

¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;

ಹೀಗೆ, “ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು” ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.

¶ ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.

ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.

¶ ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.

ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.

ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು.

ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.

¶ ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; ‹“ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು”› ಅಂದನು.

ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.

ಹೀಗಿರುವುದರಿಂದ ರೋಮಾಪುರದಲ್ಲಿರುವ ನಿಮಗೆ ಸಹ ಸುವಾರ್ತೆಯನ್ನು ಸಾರುವುದಕ್ಕೆ ನಾನಂತೂ ಸಿದ್ಧವಾಗಿದ್ದೇನೆ.

ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ ಸೊದೋಮ್ ಎಂದು, ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು.