ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.
TSK
TSK · ಅಪೊಸ್ತಲರ ಕೃತ್ಯಗ 2:17
Treasury of Scripture Knowledge references in ಕನ್ನಡ IRV.
ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು.
ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.
¶ ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.
ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.
ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.
ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.
ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.
ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಮಾನವರೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.
‹ನೀನು ಯಾರಾರನ್ನು ಕೊಟ್ಟಿದ್ದೀಯೋ›‹ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.›
ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.
ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,
ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. ಅಂತ್ಯಕಾಲ ಬಂದರೂ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.