TSK

TSK · ಅಪೊಸ್ತಲರ ಕೃತ್ಯಗ 2:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು; ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು.

ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು;

ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.

¶ ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.

‹ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು”› ಎಂದು ಕೂಗಿ ಹೇಳಿದನು.

‹ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.›

‹ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ›‹ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.›

ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, ‹“ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,›

ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.

ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ,

¶ ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು.

ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”

ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗೆ ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ ಸುರಿಸಿದನು.

ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.