ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ?
TSK
TSK · ಅಪೊಸ್ತಲರ ಕೃತ್ಯಗ 2:4
Treasury of Scripture Knowledge references in ಕನ್ನಡ IRV.
ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದ್ದದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು.
¶ ಹೌದು, ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಯೆಹೋವನು ಈ ಜನರೊಂದಿಗೆ ಮಾತನಾಡುವನು.
ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.
ಸೆರೆಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಅವರಿಗೆ ಸಾರು.”
‹ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು.›
ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.
¶ ಇದಲ್ಲದೆ ಆ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ನುಡಿದ ಪ್ರವಾದನೆ ಏನೆಂದರೆ,
‹ಏಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು”› ಅಂದನು.
‹ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.›
‹ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು”› ಎಂದು ಅಪ್ಪಣೆ ಕೊಟ್ಟನು.
ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.
ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.
ಈ ಮಾತು ಸರ್ವರಿಗೂ ಒಳ್ಳೆಯದೆಂದು ತೋಚಿತು. ಅವರು ಪವಿತ್ರಾತ್ಮಭರಿತರೂ, ನಂಬಿಕೆಯಿಂದ ತುಂಬಿದವರೂ ಆದ ಸ್ತೆಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬುವವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.
ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೆಯನ್ನೂ, ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು;
ಅನ್ಯಜನಗಳಿಗೂ ಪವಿತ್ರಾತ್ಮನ ದಾನವಾಯಿತಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು.
ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು, ನೀವು ಪೂರ್ಣಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರಿ ಎಂದು ಅವರಿಗೆ ಬುದ್ಧಿಹೇಳಿದನು. ಆಗ ಬಹುಮಂದಿ ಕರ್ತನೊಂದಿಗೆ ಸೇರಿಕೊಂಡರು.
ಶಿಷ್ಯರಾದವರು ಸಂತೋಷಭರಿತರೂ, ಪವಿತ್ರಾತ್ಮಭರಿತರೂ ಆಗಿದ್ದರು.
ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.
¶ ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು.
ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಅನ್ಯಭಾಷೆಗಳನ್ನಾಡುತ್ತೇನೆಂದು ದೇವರನ್ನು ಕೊಂಡಾಡುತ್ತೇನೆ.
¶ ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.