¶ ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ.
TSK
TSK · ಅಪೊಸ್ತಲರ ಕೃತ್ಯಗ 2:40
Treasury of Scripture Knowledge references in ಕನ್ನಡ IRV.
ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.
‹ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು?›‹ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.›
ಅದಕ್ಕೆ ಯೇಸು, ‹“ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ”› ಅಂದನು.
‹ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು”› ಎಂದನು.
ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.
ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.
ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು.
ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.
¶ ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.
ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.
¶ ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.
ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ,
¶ ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.
¶ ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.
¶ ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.