ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.
TSK
TSK · ಅಪೊಸ್ತಲರ ಕೃತ್ಯಗ 2:43
Treasury of Scripture Knowledge references in ಕನ್ನಡ IRV.
ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.
ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
¶ ‹“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ;›‹ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.›
ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.
ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.
ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.