TSK

TSK · ಅಪೊಸ್ತಲರ ಕೃತ್ಯಗ 20:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.

ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.

‹ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.›

ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.

¶ ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.

ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.

ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.

¶ ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,

ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.

ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.

ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು.

¶ ನಾವು ಮಕೆದೋನ್ಯಕ್ಕೆ ಬಂದ ಮೇಲೂ ನಮ್ಮ ದೇಹಕ್ಕೆ ನೆಮ್ಮದಿ ಇರಲಿಲ್ಲ, ಬದಲಾಗಿ ಎಲ್ಲಾ ವಿಷಯಗಳಲ್ಲಿಯೂ ನಮಗೆ ತೊಂದರೆಗಳಿದ್ದವು. ಹೊರಗೆ ಜಗಳ, ಒಳಗೆ ಭಯ

ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.

ನಾನು ದೈಹಿಕವಾಗಿ ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲಿದ್ದು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.

ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.

ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ

ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.

¶ ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,