TSK

TSK · ಅಪೊಸ್ತಲರ ಕೃತ್ಯಗ 20:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.

¶ ಅನೇಕ ದಿನಗಳು ಕಳೆದ ಮೇಲೆ, ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.

¶ ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.

ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.

¶ ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.

¶ ನಾನು ಇಂಥ ಭರವಸವುಳ್ಳವನಾಗಿದ್ದರಿಂದ ನೀವು ಎರಡನೆಯ ಸಾರಿ ಕೃಪಾರ್ಶೀವಾದವನ್ನು ಪಡೆದುಕೊಳ್ಳುವಂತೆ ನಿಮ್ಮ ಬಳಿಗೆ ಮೊದಲೇ ಬರಬೇಕೆಂದಿದ್ದೆನು.

ಕ್ರಿಸ್ತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು. ನದಿಗಳ ಅಪಾಯಗಳೂ, ಕಳ್ಳರ ಅಪಾಯಗಳೂ, ಸ್ವಂತ ಜನರಿಂದ ಅಪಾಯಗಳೂ, ಅನ್ಯಜನರಿಂದ ಅಪಾಯಗಳೂ, ಪಟ್ಟಣದಲ್ಲಿ ಅಪಾಯ, ನಿರ್ಜನ ಸ್ಥಳದಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ, ಸುಳ್ಳು ಸಹೋದರರೊಳಗಿನಿಂದಾದ ಅಪಾಯಗಳೂ ನನಗೆ ಸಂಭವಿಸಿದವು.