“ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.
TSK
TSK · ಅಪೊಸ್ತಲರ ಕೃತ್ಯಗ 20:31
Treasury of Scripture Knowledge references in ಕನ್ನಡ IRV.
‹ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು.›
‹ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ”› ಅಂದನು.
ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.
ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.
¶ “ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.
ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.
¶ ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.
¶ ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.