TSK

TSK · ಅಪೊಸ್ತಲರ ಕೃತ್ಯಗ 21:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.

“ರಹಬ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.

¶ ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬರಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು.

ಹೇಗೆಂದರೆ, ‹“ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.›

‹ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.›

¶ ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.

¶ ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.

ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.

¶ ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.

ಅಲ್ಲಿಂದ ಹೊರಟು ವಿರುದ್ಧ ದಿಕ್ಕಿನಲ್ಲಿ ಗಾಳಿ ಬೀಸುತ್ತಿದ್ದುದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ,