¶ ಆನಂತರ ಪಿಲಾತನು ಯೇಸುವನ್ನು ಕರೆದುಕೊಂಡು ಹೋಗಿ ಆತನನ್ನು ಕೊರಡೆಯಿಂದ ಹೊಡೆಸಿದನು.
TSK
TSK · ಅಪೊಸ್ತಲರ ಕೃತ್ಯಗ 22:24
Treasury of Scripture Knowledge references in ಕನ್ನಡ IRV.
ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.
ಇವನಾರು? ಏನು ಮಾಡಿದ್ದಾನೆ? ಎಂದು ಕೇಳಲು ಕೆಲವರು ಹೀಗೆ, ಕೆಲವರು ಹಾಗೆ ಕೂಗುತ್ತಿರಲು ಗದ್ದಲದ ನಿಮಿತ್ತ ನಿಜ ಸ್ಥಿತಿಯನ್ನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಿರೆಂದು ಅಪ್ಪಣೆಕೊಟ್ಟನು.
ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.
ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು.