TSK

TSK · ಅಪೊಸ್ತಲರ ಕೃತ್ಯಗ 22:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.

ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.

‹ಅದಕ್ಕೆ ಉತ್ತರವಾಗಿ ಅರಸನು,›‹‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.›

ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,

ಆ ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಅಂದರು.

ನಾವೆಲ್ಲರು ನೆಲಕ್ಕೆ ಬೀಳಲು; ‹‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ?› ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು’ ಕೇಳಿದೆನು.

ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.