TSK

TSK · ಅಪೊಸ್ತಲರ ಕೃತ್ಯಗ 23:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.

¶ “ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ” ಎಂದು ಹೇಳಿದನು.

¶ ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.

ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.

ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.

¶ ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರಸಲ್ಲಿಸುತ್ತೇನೆ.

ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.