TSK

TSK · ಅಪೊಸ್ತಲರ ಕೃತ್ಯಗ 23:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.

ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ. ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.

¶ ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು.

ಅವರು ಹೊಂಚು ಹಾಕಿಕೊಂಡಿರುವುದನ್ನು, ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ಆ ವಾರ್ತೆಯನ್ನು ತಿಳಿಸಿದನು.

ಮರುದಿನ ಅವರು ಸವಾರರನ್ನು ಅವನ ಜೊತೆಯಲ್ಲಿ ಹೋಗುವಂತೆ ಮಾಡಿ, ತಾವು ಕೋಟೆಗೆ ಹಿಂತಿರುಗಿ ಬಂದರು.

¶ ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.