TSK

TSK · ಅಪೊಸ್ತಲರ ಕೃತ್ಯಗ 23:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.

ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.

ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.

ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.

ಕೂಡಲೆ ಯೇಸು ಮಾತನಾಡಿ ಅವರಿಗೆ, ‹“ಧೈರ್ಯವಾಗಿರಿ ನಾನೇ ಭಯಪಡಬೇಡಿರಿ”› ಎಂದು ಹೇಳಿದನು.

ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.

‹ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.›‹ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ”› ಎಂದು ಹೇಳಿದನು.

ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; ‹“ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು,›

ಇಗೋ, ನಾನು ಈಗ ಪವಿತ್ರಾತ್ಮನ ನಿರ್ಬಂಧವುಳ್ಳವನಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೆ ಏನು ಸಂಭವಿಸುವುದೋ ನಾನರಿಯೆನು.

ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವುದೇ ಹೊರತು, ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವುದಿಲ್ಲ.

ಹೀಗಿರುವುದರಿಂದ ರೋಮಾಪುರದಲ್ಲಿರುವ ನಿಮಗೆ ಸಹ ಸುವಾರ್ತೆಯನ್ನು ಸಾರುವುದಕ್ಕೆ ನಾನಂತೂ ಸಿದ್ಧವಾಗಿದ್ದೇನೆ.

ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು.