TSK

TSK · ಅಪೊಸ್ತಲರ ಕೃತ್ಯಗ 23:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಯೋನಾದಾಬನು ಅವನಿಗೆ, “ನೀನು ಅಸ್ವಸ್ಥನಾದವನಂತೆ ಹಾಸಿಗೆಯ ಮೇಲೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ನೋಡುವುದಕ್ಕೆ ಬಂದಾಗ ಅವನಿಗೆ, ‘ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವುದಕ್ಕೆ ಕಳುಹಿಸು. ಆಕೆ ನನ್ನೆದುರಿನಲ್ಲಿಯೆ ಸಿದ್ಧಮಾಡಿ, ತನ್ನ ಕೈಯಿಂದಲೇ ಊಟಮಾಡಿಸಲಿ’ ಎಂದು ಹೇಳು” ಎಂದನು.

ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.

ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.

ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;

ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.