TSK

TSK · ಅಪೊಸ್ತಲರ ಕೃತ್ಯಗ 23:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೋನಾತಾನ ಮತ್ತು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಮತ್ತು ಇವರ ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಕ್ಕೆ ಬರಲಿಲ್ಲ.

ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.

ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.

ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”