TSK

TSK · ಅಪೊಸ್ತಲರ ಕೃತ್ಯಗ 23:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.

¶ ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.

“ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.

ನನ್ನ ವಿರುದ್ಧ ಅವರಿಗೆ ಏನಾದರೂ ಇದ್ದರೆ, ತಾವೇ ನಿನ್ನ ಮುಂದೆ ತಪ್ಪುಹೊರಿಸುವುದಕ್ಕೆ ಇಲ್ಲಿಗೆ ಬರಬೇಕಾಗಿತ್ತು.

¶ “ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು.