ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.
TSK
TSK · ಅಪೊಸ್ತಲರ ಕೃತ್ಯಗ 23:34
Treasury of Scripture Knowledge references in ಕನ್ನಡ IRV.
ಎಸ್ತೇರಳು 8:9
TSK
ದಾನಿಯೇಲನು 6:1
TSK
¶ ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು.
ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.
¶ ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.