ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನೂ. ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದಿ.
TSK
TSK · ಅಪೊಸ್ತಲರ ಕೃತ್ಯಗ 23:9
Treasury of Scripture Knowledge references in ಕನ್ನಡ IRV.
ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
ಪಿಲಾತನು ಮುಖ್ಯಯಾಜಕರಿಗೂ, ಜನರ ಗುಂಪಿಗೂ, “ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುತ್ತಿಲ್ಲವೆಂದು” ಹೇಳಿದನು.
¶ ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು.
ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.
ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು.
¶ “ಅನಂತರದಲ್ಲಿ ನಾನು ಯೆರೂಸಲೇಮಿಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ, ಧ್ಯಾನಪರವಶನಾಗಿ ಅವನನ್ನು ಕಂಡೆನು.
ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.
ನಾವೆಲ್ಲರು ನೆಲಕ್ಕೆ ಬೀಳಲು; ‹‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ?› ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು’ ಕೇಳಿದೆನು.
ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;