ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ.
TSK
TSK · ಅಪೊಸ್ತಲರ ಕೃತ್ಯಗ 24:1
Treasury of Scripture Knowledge references in ಕನ್ನಡ IRV.
ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.
ಅದಕ್ಕೆ ಮಹಾಯಾಜಕನಾದ ಅನನೀಯನು; ಅವನ ಬಾಯಿಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆ ಕೊಡಲು ಪೌಲನು ಅವನಿಗೆ;
ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ.
ನಾನು ದೇವಾರಾಧನೆಮಾಡುವುದಕ್ಕೆ, ಯೆರೂಸಲೇಮಿಗೆ ಹೋಗಿ, ಹನ್ನೆರಡು ದಿನಗಳು ಮಾತ್ರವಾಗಿದೆಯೆಂದು ನೀನು ತಿಳಿದುಕೊಳ್ಳಬಹುದು.
ನಾನು ಯೆರೂಸಲೇಮಿನಲ್ಲಿದ್ದಾಗ, ಯೆಹೂದ್ಯರ ಮುಖ್ಯಯಾಜಕರೂ, ಹಿರಿಯರೂ ಅವನ ವಿಷಯವಾಗಿ ನನಗೆ ದೂರುಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು.
ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.