TSK

TSK · ಅಪೊಸ್ತಲರ ಕೃತ್ಯಗ 24:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.

‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ ‘ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ’” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು.

‹ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.›

‹ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ”› ಎಂದು ಹೇಳಿದನು.

¶ ‹“ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.›

ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.

ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.

ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.

ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು.

ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.

ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.

¶ “ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’

ಈಗಲೂ ದೇವರು ನಮ್ಮ ಪೂರ್ವಿಕರಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ.

ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ?” ಉಂಟೆಂದು ನಾನು ಬಲ್ಲೆನು ಅಂದನು.

¶ ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.

ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ,

ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು;

¶ ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.