TSK

TSK · ಅಪೊಸ್ತಲರ ಕೃತ್ಯಗ 24:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.

ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.

ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು.

ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.

ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು, ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.

ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.

ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.

ಮದ್ಯಪಾನ ಮುಗಿದ ಕೂಡಲೆ ವ್ಯಭಿಚಾರದಲ್ಲಿ ತೊಡಗುತ್ತಾರೆ; ದೇಶಪಾಲಕರು ಅವಮಾನದಲ್ಲಿ ಅತ್ಯಾಶೆಪಡುತ್ತಾರೆ.

¶ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು.

ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.

¶ “ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.

ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.

ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.