ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.
TSK
TSK · ಅಪೊಸ್ತಲರ ಕೃತ್ಯಗ 24:27
Treasury of Scripture Knowledge references in ಕನ್ನಡ IRV.
ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.
ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.
¶ ಫೆಸ್ತನು ಅಧಿಕಾರ ವಹಿಸಿಕೊಂಡು, ಮೂರು ದಿನಗಳಾದ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
¶ ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;
¶ ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.
¶ ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು.